ಇಷ್ಟು ದಿನ ಈ ವೈಕುಂಠ
ಎಷ್ಟು ದೂರವೋ ಎನುತಲಿದ್ದೆ
ದೃಷ್ಟಿಯಿಂದಲಿ ನಾನು ಕಂಡೆ
ಸೃಷ್ಟಿಗೀಶನೇ ಶ್ರೀರಂಗಶಾಯಿ ||1||
ಎಷ್ಟು ದೂರವೋ ಎನುತಲಿದ್ದೆ
ದೃಷ್ಟಿಯಿಂದಲಿ ನಾನು ಕಂಡೆ
ಸೃಷ್ಟಿಗೀಶನೇ ಶ್ರೀರಂಗಶಾಯಿ ||1||
ಎಂಟು ಏಳನು ಕಳೆದುದರಿಂದ
ಬಂಟರೈವರ ತುಳಿದುದರಿಂದ
ಕಂಟಕನೊಬ್ಬನ ತರಿದುದರಿಂದ
ಬಂಟನಾಗಿ ಬಂದನೋ ಶ್ರೀರಂಗಶಾಯಿ ||2||ವನ ಉಪವನಗಳಿಂದ
ಘನ ಸರೋವರಗಳಿಂದ
ಕನಕ ಗೋಪುರಗಳಿಂದ
ಘನಶೋಭಿತನೆ ಶ್ರೀರಂಗಶಾಯಿ ||3||ವಜ್ರ ವೈಢೂರ್ಯದ ತೊಲೆಗಳ ಕಂಡೆ
ಪ್ರಜ್ವಲಿಪ ಮಹಾದ್ವಾರವ ಕಂಡೆ
ನಿರ್ಜರಾದಿ ಮುನಿಗಳ ಕಂಡೆ
ದುರ್ಜನಾಂತಕನೆ ಶ್ರೀರಂಗಶಾಯಿ ||4||
ಬಂಟರೈವರ ತುಳಿದುದರಿಂದ
ಕಂಟಕನೊಬ್ಬನ ತರಿದುದರಿಂದ
ಬಂಟನಾಗಿ ಬಂದನೋ ಶ್ರೀರಂಗಶಾಯಿ ||2||ವನ ಉಪವನಗಳಿಂದ
ಘನ ಸರೋವರಗಳಿಂದ
ಕನಕ ಗೋಪುರಗಳಿಂದ
ಘನಶೋಭಿತನೆ ಶ್ರೀರಂಗಶಾಯಿ ||3||ವಜ್ರ ವೈಢೂರ್ಯದ ತೊಲೆಗಳ ಕಂಡೆ
ಪ್ರಜ್ವಲಿಪ ಮಹಾದ್ವಾರವ ಕಂಡೆ
ನಿರ್ಜರಾದಿ ಮುನಿಗಳ ಕಂಡೆ
ದುರ್ಜನಾಂತಕನೆ ಶ್ರೀರಂಗಶಾಯಿ ||4||
ರಂಭೆ ಊರ್ವಶಿಯರ ಮೇಳವ ಕಂಡೆ
ತುಂಬುರು ಮುನಿ ನಾರದರನು ಕಂಡೆ
ಅಂಬುಜೋದ್ಭವ ರುದ್ರರ ಕಂಡೆ
ಶಂಬರಾರಿಪಿತನೆ ಶ್ರೀರಂಗಶಾಯಿ ||5||
ನಾಗಶಯನನ ಮೂರುತಿ ಕಂಡೆ
ಭೋಗಿಭೂಷಣ ಶಿವನನು ಕಂಡೆ
ಭಾಗವತರ ಸಮ್ಮೇಳವ ಕಂಡೆ
ಕಾಗಿನೆಲೆಯಾದಿಕೇಶವ ಶ್ರೀರಂಗಶಾಯಿ ||6||