ದಾಸನ ಮಾಡಿಕೊ ಎನ್ನ ಸ್ವಾಮಿ

ದಾಸನ ಮಾಡಿಕೊ ಎನ್ನ ಸ್ವಾಮಿ
ಸಾಸಿರ ನಾಮದ ವೆಂಕಟರಮಣ

ದುರ್ಬುದ್ಧಿಗಳನೆಲ್ಲ ಬಿಡಿಸೊ ನಿನ್ನ
ಕರುಣ-ಕವಚವೆನ್ನ ಹರಣಕೆ ತೊಡಿಸೊ
ಚರಣಸೇವೆ ಎನಗೆ ಕೊಡಿಸೊ ಅಭಯ
ಕರ ಪುಷ್ಪವ ಎನ್ನ ಶಿರದಲ್ಲಿ ಮುಡಿಸೊ

ದೃಢಭಕ್ತಿ ನಿನ್ನಲ್ಲಿ ಬೇಡಿ ನಾ
ಅಡಿಗೆರಗುವೆನಯ್ಯ ಅನುದಿನ ಪಾಡಿ
ಕಡೆಗಣ್ಣಲೇಕೆನ್ನ ನೋಡಿ ಬಿಡುವೆ
ಕೊಡು ನಿನ್ನ ಧ್ಯಾನವ ಮನಶುಚಿ ಮಾಡಿ

ಮೊರೆಹೊಕ್ಕವರ ಕಾಯುವ ಬಿರುದು ಎನ್ನ
ಮರೆಯದೆ ರಕ್ಷಣೆ ಮಾಡಯ್ಯ ಪೊರೆದು
ದುರಿತಗಳೆಲ್ಲವ ತರಿದು ಸಿರಿ
ಪುರಂದರ ವಿಠಲ ಎನ್ನನು ಪೊರೆದು

Leave a Reply

*

This site uses Akismet to reduce spam. Learn how your comment data is processed.